Wayanad Landslide LIVE | ಸಾವಿನ ಸಂಖ್ಯೆ 243ಕ್ಕೆ ಏರಿಕೆ; ಅಮಿತ್ ಶಾ ಮುನ್ಸೂಚನೆ ಹೇಳಿಕೆಗೆ ಕೇರಳ ಸಿಎಂ ತಿರುಗೇಟು
x
ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ | ಪಿಟಿಐ

Wayanad Landslide LIVE | ಸಾವಿನ ಸಂಖ್ಯೆ 243ಕ್ಕೆ ಏರಿಕೆ; ಅಮಿತ್ ಶಾ ಮುನ್ಸೂಚನೆ ಹೇಳಿಕೆಗೆ ಕೇರಳ ಸಿಎಂ ತಿರುಗೇಟು


ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದ ಸ್ಥಳಗಳಲ್ಲಿ ಎರಡನೇ ದಿನವೂ ಕಣ್ಮರೆಯಾದ ಜನರ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾಗಿದ್ದು, ಬದುಕುಳಿದವರನ್ನು ಹೊರತೆಗೆಯಲು ರಕ್ಷಣಾ ತಂಡಗಳು ಮುಂದಾಗಿವೆ.

ಮಂಗಳವಾರ (ಜುಲೈ 30) ಮುಂಜಾವ ಭಾರೀ ಮಳೆಯ ನಡುವೆ ಕೇರಳದ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಬಳಿ ಭಾರೀ ಭೂ ಕುಸಿತದಿಂದ ಈವರೆಗೆ, 243 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ.

ನೂರಾರು ಮಂದಿ ಇನ್ನೂ ಅವಶೇಷಗಳಡಿ ಸಿಲುಕಿದ್ದು, ಸಾವು-ನೋವು ಸಂಭವಿಸುವ ಭೀತಿ ಎದುರಾಗಿದೆ.

ಸೇನೆ, ನೌಕಾಪಡೆ ಮತ್ತು NDRF ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಬದುಕುಳಿದವರನ್ನು ಹೊರತೆಗೆಯಲು ಪ್ರಯತ್ನ ನಡೆಸಿವೆ. ಸಂತ್ರಸ್ತರಿಗೆ ನೆರವು ನೀಡಲು ಅನೇಕರು ಮುಂದಾಗಿದ್ದಾರೆ.

ಸರ್ಕಾರದ ಮೂಲಗಳ ಪ್ರಕಾರ, ವಯನಾಡ್ ಜಿಲ್ಲೆಯ ಮೆಪ್ಪಾಡಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಭಾರೀ ಭೂಕುಸಿತಗಳು ಸಂಭವಿಸಿವೆ. ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾಳಾಗಿವೆ ಹಾಗಾಗಿ ಸಂಪರ್ಕವೂ ಕಡಿದುಕೊಂಡಿವೆ.

ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಮೃತರ ದೇಹಗಳನ್ನು ಗುರುತಿಸಲು ಮತ್ತು ಮರಣೋತ್ತರ ಪರೀಕ್ಷೆಗಾಗಿ ವಿವಿಧ ಆಸ್ಪತ್ರೆಗಳ ಶವಾಗಾರಗಳಿಗೆ ಕೊಂಡೊಯ್ಯಲಾಗುತ್ತಿದೆ.

ಬದುಕುಳಿದವರನ್ನು ತ್ವರಿತವಾಗಿ ಸ್ಥಳಾಂತರಿಸಲು, ಸೂಲೂರಿನಿಂದ ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ

ಹೆಚ್ಚಿನ ಲೈವ್ ಅಪ್‌ಡೇಟ್‌ಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: https://thefederal.com/category/live/wayanad-landslides-live-rescue-ops-continue-on-second-day-toll-143-136259?infinitescroll=1

Live Updates

  • 31 July 2024 7:59 AM GMT

    ದೇಶವೇ ಅಳುತ್ತಿದೆ: ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್


  • 31 July 2024 7:57 AM GMT

    ಐಎಎಫ್ ರಕ್ಷಣಾ ಕಾರ್ಯಾಚರಣೆಗಾಗಿ ಧ್ರುವ್ ಹೆಲಿಕಾಪ್ಟರ್‌ ಬಳಕೆ 


  • 31 July 2024 7:54 AM GMT

    1,200 ರಕ್ಷಣಾ ಕಾರ್ಯಕರ್ತರ ನಿಯೋಜನೆ

  • 31 July 2024 7:46 AM GMT

    ಬದುಕುಳಿದವರು ಮತ್ತು ಮೃತ ದೇಹಗಳನ್ನು ಹುಡುಕಲು ರಕ್ಷಣಾ ಕಾರ್ಯಕರ್ತರ ದೊಡ್ಡ ತಂಡವಿದೆ: ಮುಖ್ಯ ಕಾರ್ಯದರ್ಶಿ ಡಾ ವಿ ವೇಣು

  • 31 July 2024 7:26 AM GMT

    ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ಉತ್ತಮ ಕೆಲಸ ಮಾಡುತ್ತಿವೆ ಎಂದು ಕೇರಳ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಹೇಳಿದ್ದಾರೆ.

  • 31 July 2024 6:41 AM GMT

    ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿನತ್ತ ಪ್ರಯಾಣ

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.

    ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.

    ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

    ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ.

  • 31 July 2024 6:39 AM GMT

    ರಕ್ಷಣಾ ಕಾರ್ಯಾಚರಣೆಯಲ್ಲಿ ಕೋಸ್ಟ್ ಗಾರ್ಡ್

  • 31 July 2024 6:37 AM GMT

    ಸಿಎಂ ಪರಿಶೀಲನಾ ಸಭೆ

  • 31 July 2024 6:36 AM GMT

    ಸಂತ್ರಸ್ತರನ್ನು ಭೇಟಿ ಮಾಡಿದ ಬಂಗಾಳದ ರಾಜ್ಯಪಾಲ

  • 31 July 2024 6:34 AM GMT

    ಎರಡು ರೆಸಾರ್ಟ್‌ಗಳಿಂದ 19 ಜನರ ರಕ್ಷಣೆ

Read More
Next Story