ಸಹ ವಿದ್ಯಾರ್ಥಿಗೆ ಚಿತ್ರಹಿಂಸೆ ನೀಡಿ ಹತ್ಯೆ
x

ಸಹ ವಿದ್ಯಾರ್ಥಿಗೆ ಚಿತ್ರಹಿಂಸೆ ನೀಡಿ ಹತ್ಯೆ


ಹೈದರಾಬಾದ್, ಮಾ.4- ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ 21 ವರ್ಷದ ಪದವಿ ವಿದ್ಯಾರ್ಥಿಯನ್ನು ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ವಿದ್ಯಾರ್ಥಿಗಳು ಹೊಡೆದು ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಎಲ್ಲಾ ಏಳು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಬೋಧನ್ ಪಟ್ಟಣದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ನಿಜಾಮಾಬಾದ್ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿರುವ ವೆಂಕಟ್(21) ಎಂಬಾತನನ್ನು ಮಧ್ಯಂತರ ಮತ್ತು ಪದವಿ ವ್ಯಾಸಂಗ ಮಾಡುತ್ತಿರುವ ಏಳು ವಿದ್ಯಾರ್ಥಿಗಳು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ಹಾಸ್ಟೆಲ್‌ನಲ್ಲಿ ಇಂಟರ್ಮೀಡಿಯೇಟ್ ಪ್ರಥಮ ವರ್ಷದ ವಿದ್ಯಾರ್ಥಿ ಪರೀಕ್ಷೆ ಅವ್ಯವಹಾರದ ಬಗ್ಗೆ ಚರ್ಚಿಸಿದಾಗ, ಅಧ್ಯಯನದತ್ತ ಗಮನ ಹರಿಸುವಂತೆ ವೆಂಕಟ್‌ ಹೇಳಿದ್ದರು. ಆನಂತರ, ಆತ ಹಾಸ್ಟೆಲ್‌ನಲ್ಲಿರುವ ತನ್ನ ಅಣ್ಣನಿಗೆ ಮಾಹಿತಿ ನೀಡಿದ್ದಾನೆ. ಸಹೋದರ ಸೇರಿದಂತೆ ಇತರ ವಿದ್ಯಾರ್ಥಿಗಳು ವೆಂಕಟ್ ಜತೆ ವಾಗ್ವಾದ ನಡೆಸಿ, ಥಳಿಸಿ ಕತ್ತು ಹಿಸುಕಿ ಕೊಂದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದ ಹಾಸ್ಟೆಲ್ ಅಧಿಕಾರಿಗಳು ವೆಂಕಟ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಕೊಲೆ ಪ್ರಕರಣ ದಾಖಲಾಗಿದೆ. ಘಟನೆಯನ್ನು ಖಂಡಿಸಿ ಕೆಲವು ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.

Read More
Next Story