x

ಮುಡಾ ಅಕ್ರಮ: ಸಿದ್ದರಾಮಯ್ಯ ಕುಟುಂಬದ ಮೇಲಿರುವ ಆರೋಪವೇನು ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ, ಪುತ್ರ ಮತ್ತು ಇತರೆ ಕೆಲವು ಆಪ್ತರ ಹೆಸರು ಪ್ರಕರಣದಲ್ಲಿ ಕೇಳಿಬಂದಿದ್ದು, ಇಡೀ ಹಗರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಈ ಸಾವಿರಾರು ಕೋಟಿ ರೂಪಾಯಿ ಬೃಹತ್ ಹಗರಣದ ಮಾಹಿತಿ ಇಲ್ಲಿದೆ. ಏನಿದು ಹಗರಣ? ಏನು ಆರೋಪ? ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಹಂಚಿಕೆಯಲ್ಲಿ ಸುಮಾರು 5 ಸಾವಿರ ಕೋಟಿ ರೂ.ಗಳಷ್ಟು ಭಾರೀ ಮೊತ್ತದ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಪ್ರಾಧಿಕಾರದಿಂದ ಲೇಔಟ್ ನಿರ್ಮಾಣದ ವೇಳೆ ಈ ಅಕ್ರಮ ನಡೆದಿದ್ದು, ಲೇಔಟ್ಗಾಗಿ ಪಡೆದ ಭೂಮಿಯ ಬದಲಿಗೆ ಭೂ ಮಾಲೀಕರಿಗೆ ನೀಡಬೇಕಾದ 50-50 ನಿವೇಶನಗಳ ಹಂಚಿಕೆಯಲ್ಲಿ ಈ ಅಕ್ರಮ ನಡೆದಿದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರೂ ಫಲಾನುಭವಿ ಎನ್ನುವುದು ಬಿಜೆಪಿಯ ಆರೋಪವಾಗಿದೆ.


Next Story